ADVERTISEMENT

ನಕ್ಸಲರಿಂದ ಬಾಂಬ್ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿ ಸಾವು

ಪಿಟಿಐ
Published 4 ಮಾರ್ಚ್ 2021, 7:09 IST
Last Updated 4 ಮಾರ್ಚ್ 2021, 7:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಗುರುವಾರ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ನಡೆಸಿದ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಹೋಯಹತು ಹಳ್ಳಿಯಲ್ಲಿ ಬೆಳಿಗ್ಗೆ 8.45ರಲ್ಲಿ ಈ ಘಟನೆ ಸಂಭವಿಸಿದೆ. ರಾಜ್ಯ ಪೊಲೀಸ್ ಇಲಾಖೆಯ ಜಾರ್ಖಂಡ್ ಜಾಗ್ವಾರ್ಸ್‌ ವಿಭಾಗದ ವಿಶೇಷ ಘಟಕದ ಇಬ್ಬರು ಅಧಿಕಾರಿಗಳು ಘಟನೆಯಲ್ಲಿ ಹತರಾಗಿದ್ದಾರೆ. ಜಾರ್ಖಂಡ್ ಜಾಗ್ವರ್ಸ್‌ ಮತ್ತು ಸಿಆರ್‌ಪಿಎಫ್‌ನ ಒಬ್ಬರು ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT