ADVERTISEMENT

ಪುಲ್ವಾಮಾ ಎನ್‌ಕೌಂಟರ್: ಎಲ್‌ಇಟಿ ಕಮಾಂಡರ್ ಉಮರ್ ಮುಷ್ತಾಕ್ ಖಾಂಡೆ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಅಕ್ಟೋಬರ್ 2021, 10:33 IST
Last Updated 16 ಅಕ್ಟೋಬರ್ 2021, 10:33 IST
ಪ್ರಾತಿನಿಧಿಕ: ಎಎಫ್‌ಪಿ ಸಂಗ್ರಹ ಚಿತ್ರ
ಪ್ರಾತಿನಿಧಿಕ: ಎಎಫ್‌ಪಿ ಸಂಗ್ರಹ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಂಪೋರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಇ-ತಯ್ಯಬಾ ಕಮಾಂಡರ್ ಉಮರ್ ಮುಷ್ತಾಕ್ ಖಾಂಡೆಯನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಎಎನ್ಐ ಶನಿವಾರ ಟ್ವೀಟ್ ಮಾಡಿದೆ.

ಈ ವರ್ಷದ ಆಗಸ್ಟ್‌ನಲ್ಲಿ ಪೊಲೀಸರು ಹಿಟ್ ಲಿಸ್ಟ್ ಅನ್ನು ಬಿಡುಗಡೆ ಮಾಡಿದಾಗಿನಿಂದ ಭದ್ರತಾ ಪಡೆಗಳು ಗುರಿ ಇರಿಸಿದ್ದ ಉಗ್ರಗಾಮಿಗಳ ಪೈಕಿ ಖಾಂಡೆ ಸಹ ಒಬ್ಬನಾಗಿದ್ದ.

ಈ ವರ್ಷದ ಆರಂಭದಲ್ಲಿ ಶ್ರೀನಗರ ಜಿಲ್ಲೆಯ ಬಘಾಟ್‌ನಲ್ಲಿ ನಡೆದ ಇಬ್ಬರು ಪೊಲೀಸರ ಹತ್ಯೆಯಲ್ಲಿ ಆತ ಭಾಗಿಯಾಗಿದ್ದನು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಕಾಶ್ಮೀರ) ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ADVERTISEMENT

ಈ ಮಧ್ಯೆ, ಕಾಶ್ಮೀರದ ಎನ್‌ಕೌಂಟರ್‌ನಲ್ಲಿ ತಪ್ಪಿಸಿಕೊಂಡು ಅಡಗಿ ಕುಳಿತಿರುವ ಉಗ್ರರ ಬೇಟೆಗೆ ಭದ್ರತಾ ಪಡೆ ಕಾರ್ಯಾಚರಣೆ ಮುಂದುವರೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.