ADVERTISEMENT

ಅತ್ಯಾಚಾರ-ಕೊಲೆ ಪ್ರಕರಣ: ದೆಹಲಿ ಸರ್ಕಾರದ ಮರುಪರಿಶೀಲನಾ ಅರ್ಜಿಗೆ ಅಂಗೀಕಾರ

ಪಿಟಿಐ
Published 21 ನವೆಂಬರ್ 2022, 6:17 IST
Last Updated 21 ನವೆಂಬರ್ 2022, 6:17 IST
ವಿ.ಕೆ. ಸಕ್ಸೇನಾ
ವಿ.ಕೆ. ಸಕ್ಸೇನಾ   

ದೆಹಲಿ: 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ದೆಹಲಿ ಸರ್ಕಾರ ಮಾಡಿದ ಮನವಿಯನ್ನು ಲೆಫ್ಟಿನೆಂಟ್ ಗವರ್ನರ್ ಅಂಗೀಕರಿಸಿದ್ದಾರೆ.

ಈ ಪ್ರಕರಣದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ದೆಹಲಿ ಸರ್ಕಾರವನ್ನು ಪ್ರತಿನಿಧಿಸುವುದಕ್ಕೂ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅನುಮತಿ ನೀಡಿದ್ದಾರೆ.

2012 ಫೆಬ್ರುವರಿ 9ರಂದು ದೆಹಲಿಯ ದ್ವಾರಕಾದ ಛಾವ್ಲಾ ಪ್ರದೇಶದಲ್ಲಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿತ್ತು.

2022 ನವೆಂಬರ್ 7ರಂದು ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಆದೇಶ ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್, ಮರಣದಂಡನೆಗೆ ಶಿಕ್ಷೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.