ADVERTISEMENT

ಉತ್ತರ ಪ್ರದೇಶ: ಸಿಡಿಲು ಬಡಿದು 3 ಸಾವು; 7 ಮಂದಿಗೆ ಗಾಯ

ಪಿಟಿಐ
Published 1 ಸೆಪ್ಟೆಂಬರ್ 2021, 5:41 IST
Last Updated 1 ಸೆಪ್ಟೆಂಬರ್ 2021, 5:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಹೋಬಾ: ‘ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದು, ಏಳು ಮಂದಿಗೆ ಗಾಯಗಳಾಗಿವೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.

ಮಕರಾಬಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು 21 ವರ್ಷದ ಪ್ರೀತಿ ಎಂಬವರು ಮೃತಪಟ್ಟಿದ್ದಾರೆ. ಗ್ಯೊಡಿ ಮತ್ತು ಬಿಜ್ರಾರಿ ಗ್ರಾಮಗಳಲ್ಲಿ ಕ್ರಮವಾಗಿ ರೈತರಾದ ನರೇಂದ್ರ ಮತ್ತು ಭಗವಾನ್‌ ದಾನ್‌ ಎಂಬವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.

ಕಮಲಪುರ ಗ್ರಾಮದಲ್ಲೂ ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಹಿಳೆಯರಿಗೆ ಗಾಯಗಳಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.