ADVERTISEMENT

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿದ ಕೋರ್ಟ್

ಪಿಟಿಐ
Published 15 ಏಪ್ರಿಲ್ 2024, 10:55 IST
Last Updated 15 ಏಪ್ರಿಲ್ 2024, 10:55 IST
<div class="paragraphs"><p>ಅರವಿಂದ ಕೇಜ್ರಿವಾಲ್&nbsp;</p></div>

ಅರವಿಂದ ಕೇಜ್ರಿವಾಲ್ 

   

ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್‌ 23ರ ವರೆಗೆ ವಿಸ್ತರಿಸಿದೆ.

ತನಿಖೆಯು ಮಹತ್ವದ ಹಂತದಲ್ಲಿದ್ದು, ಕೇಜ್ರಿವಾಲ್‌ ಕಸ್ಟಡಿ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಬೇಕು ಎಂದು ನ್ಯಾಯಾಲಯಕ್ಕೆ ಇ.ಡಿ. ಮನವಿ ಮಾಡಿತ್ತು. ಅದರಂತೆ, ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ್ದಾರೆ.

ADVERTISEMENT

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಸಂಬಂಧ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ.

ಇ.ಡಿ ಕಸ್ಟಡಿ ಅವಧಿ ಏಪ್ರಿಲ್‌ 1ರಂದು ಮುಕ್ತಾಯವಾದ ಕಾರಣ ಕೇಜ್ರಿವಾಲ್‌ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಂದು ನ್ಯಾಯಾಲಯವು, ಏಪ್ರಿಲ್‌ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.