ನಾರಾಯಣ್ಪುರ: ಛತ್ತೀಸ್ಗಢದ ನಾರಾಯಣ್ಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದವರನ್ನು ಬಿಜೆಪಿ ನಾರಾಯಣ್ಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಎಂದು ಗುರುತಿಸಲಾಗಿದೆ.
ಈ ಕೃತ್ಯದ ಹಿಂದೆ ನಕ್ಸಲರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಛೋಟೆಡೊಂಗರ್ ಗ್ರಾಮದಲ್ಲಿ ತಮ್ಮ ಮನೆಯಲ್ಲಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಇಬ್ಬರು ದಾಳಿಕೋರರು ಕುಟುಂಬ ಸದಸ್ಯರ ಎದುರುಗಡೆಯೇ ಸಾಹು ಮೇಲೆ ಗುಂಡು ಹಾರಿಸಿದ್ದಾರೆ.
ತಕ್ಷಣ ಅವರನ್ನು ನಾರಾಯಣ್ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಮೃತಪಟ್ಟಿದ್ದಾರೆ.
ಈ ಕೃತ್ಯದಲ್ಲಿ ನಕ್ಸಲರ ಕೈವಾಡ ಇದೆ ಎಂದು ಮೇಲ್ನೋಟಕ್ಕೆ ತಿಳಿದು ಬರುತ್ತಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಬಿಜಾಪುರ ಜಿಲ್ಲೆಯಲ್ಲಿ ಬಿಜೆಪಿ ಅವಪಳ್ಳಿ ಮಂಡಲ ಘಟಕದ ಅಧ್ಯಕ್ಷ ನೀಲಕಂಠ ಕಾಕೆಮ್ (40) ನಕ್ಸಲರಿಂದ ಕೊಲೆಗೀಡಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.