ನವದೆಹಲಿ: ಕೊರೊನಾ ಸೋಂಕು ಹರಡದಂತೆ ದೇಶದಾದ್ಯಂತಲಾಕ್ಡೌನ್ಜಾರಿಯಲ್ಲಿರುವಕಾರಣ ರಂಜಾನ್ ಸಂದರ್ಭದ ಪ್ರಾರ್ಥನೆ ಹಾಗೂ 'ಸಹಾರಿ'ಯನ್ನು ಜನರು ತಮ್ಮ ತಮ್ಮ ಮನೆಯಲ್ಲೇಸಲ್ಲಿಸಿದ್ದಾರೆ.
ರಂಜಾನ್ ಸಮಯದಲ್ಲಿ ಅಂತರ ಕಾಯ್ದುಕೊಳ್ಳುವುದು, ಕೊರೊನಾ ಹರಡದಂತೆ ತಡೆಯುವುದುಅನಿವಾರ್ಯವಾಗಿರುವ ಕಾರಣ ಗುಂಪುಗೂಡಿ ಪ್ರಾರ್ಥನೆ ಸಲ್ಲಿಸದಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಈ ಕಾರಣದಿಂದಾಗಿ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ
ಪ್ರಾರ್ಥನೆ ನಿಷೇಧಿಸಲಾಗಿದೆ.
ದೆಹಲಿಯ ಇಂದರ್ ಲೋಕದ ನಿವಾಸಿ ಮಹಮದ್ ಸಲೀಮ್, ಕೊರೊನಾ ಸೋಂಕು ಹರಡದಂತೆ ಲಾಕ್ ಡೌನ್ ಜಾರಿಗೆ ತಂದಿರುವ ಕಾರಣ ನಾವು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿದ್ದೇವೆ, ಸೋಂಕು ಹರಡದಂತೆ ಜಾಗೃತೆ ವಹಿಸುವುದು ಮುಖ್ಯವಾಗಿರುವುದರಿಂದ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.