ನವದೆಹಲಿ:ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದ ರಾಮ್ ಸ್ವರೂಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಲೋಕಸಭಾ ಕಲಾಪವನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿದೆ.
ಮಾರ್ಚ್ 8 ರಂದು ನಿಧನರಾದ ಮಾಜಿ ಸಂಸದ ಮನೋಹರ್ಲಾಲ್ ಸೈನಿ ಅವರಿಗೆ ಕೂಡ ಗೌರವ ನಮನ ಸಲ್ಲಿಸಲಾಯಿತು. ಈ ಬಳಿಕ ಕಾರ್ಯಕಲಾಪವನ್ನು ಮುಂದೂಡಲಾಯಿತು.
ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (62) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.