ADVERTISEMENT

ಲೋಕಸಭೆ ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ

ಪಿಟಿಐ
Published 11 ಆಗಸ್ಟ್ 2021, 7:18 IST
Last Updated 11 ಆಗಸ್ಟ್ 2021, 7:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಲೋಕಸಭೆಯ ಮುಂಗಾರು ಅಧಿವೇಶನದ ಕಲಾಪವನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಇದಕ್ಕೂ ಮುನ್ನ ಇತ್ತೀಚೆಗೆ ನಿಧನರಾದ ನಾಲ್ವರು ಮಾಜಿ ಸಂಸತ್‌ ಸದಸ್ಯರಿಗೆ ಸದನವು ಗೌರವ ಸಲ್ಲಿಸಿತು.‌ ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹಾಜರಿದ್ದರು.

ಜುಲೈ 19 ರಂದು ಅಧಿವೇಶನ ಆರಂಭವಾದಾಗಿನಿಂದಲೂ ವಿರೋಧ ಪಕ್ಷಗಳು ಪೆಗಾಸಸ್ ಗೂಢಚರ್ಯೆ, ಕೃಷಿ ಕಾಯ್ದೆಗಳು ಮತ್ತು ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದವು. ಇದರಿಂದಾಗಿ, ಕಲಾಪವನ್ನು ಪದೇ ಪದೇ ಮುಂದೂಡಲಾಗುತ್ತಿತ್ತು.

ADVERTISEMENT

ಇಡೀ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನೂ ಪ್ರತಿಭಟನೆಗಳು ನುಂಗಿ ಹಾಕಿದವು. ವಿರೋಧ ಪಕ್ಷಗಳ ಗದ್ದಲದ ನಡುವೆಯೂ ರಾಜ್ಯಗಳಿಗೆ ತಮ್ಮದೇ ಪ್ರತ್ಯೇಕ ಇತರೆ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಹಲವು ಮಸೂದೆಗಳನ್ನು ಅಂಗೀಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.