ADVERTISEMENT

ಕುಮಾರಸ್ವಾಮಿ ‘ಕಣ್ಣೀರು’ ಹಾಕಿದ್ದು ದೇಶವೇ ನೋಡಿದೆ: ಸಂಸತ್‌ನಲ್ಲಿ ರಾಕೇಶ್‌ ಸಿಂಗ್

​ಪ್ರಜಾವಾಣಿ ವಾರ್ತೆ
Published 20 ಜುಲೈ 2018, 7:29 IST
Last Updated 20 ಜುಲೈ 2018, 7:29 IST
ಬೆಂಗಳುರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕಣ್ಣೀರು ಹಾಕಿದ್ದರು(ಪ್ರಜಾವಾಣಿ ಚಿತ್ರ), ಸಂಸತ್‌ನಲ್ಲಿ ಬಿಜೆಪಿ ಸಂಸದ ರಾಕೇಶ್ ಸಿಂಗ್‌ ಮಾತನಾಡಿದರು.
ಬೆಂಗಳುರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕಣ್ಣೀರು ಹಾಕಿದ್ದರು(ಪ್ರಜಾವಾಣಿ ಚಿತ್ರ), ಸಂಸತ್‌ನಲ್ಲಿ ಬಿಜೆಪಿ ಸಂಸದ ರಾಕೇಶ್ ಸಿಂಗ್‌ ಮಾತನಾಡಿದರು.    

ನವದೆಹಲಿ:ಸಂಸತ್‌ನಲ್ಲಿ ಅವಿಶ್ವಾಸ ಮತದ ಮೇಲೆ ನಡೆಯುತ್ತಿರುವ ಚರ್ಚೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ‘ಕಣ್ಣೀರು’ ವಿಷಯ ಪ್ರಸ್ತಾಪವಾಗಿ, ಪ್ರತಿಧ್ವನಿಸಿತು.

ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ, ಪ್ರತಿಕ್ರಿಯಿಸಿ ಮಾತನಾಡಿದ ಬಿಜೆಪಿ ಸಂಸದ ರಾಕೇಶ್‌ ಸಿಂಗ್‌, ‘ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದ್ದಾರೆ. ಕಣ್ಣೀರು ಹಾಕಿದ್ದನ್ನು ಇಡೀ ದೇಶವೇ ನೋಡಿದೆ’ ಎಂದು ಪ್ರಸ್ತಾಪಿಸಿದರು.

‘ಒಂದು ಕುಟುಂಬದ ಸರ್ಕಾರಕ್ಕೆ ಮಾತ್ರ ಕಾಂಗ್ರೆಸ್ ಬೆಂಬಲ ನೀಡಿದೆ. ಜೆಡಿಎಸ್‌ ಜತೆಗೂಡಿ ಇನ್ನೆಷ್ಟು ಪಕ್ಷಗಳು ವಿಷ ಕುಡಿಯಬೇಕು?’ ಎಂದು ರಾಕೇಶ್‌ ಸಿಂಗ್‌ ಎಂದು ಕುಟುಕಿದರು.

ADVERTISEMENT

ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ನಡೆದ ಸಭಾ ಕಾರ್ಯಕ್ರಮವೊಂದರಲ್ಲಿ ತಮ್ಮ ಅಂತರಾಳದ ನೋವನ್ನು ತೋಡಿಕೊಂಡು ಕಣ್ಣೀರು ಹಾಕಿದ್ದರು.

ಸಿಎಂ ಕಣ್ಣೀರು ಮೈತ್ರಿ ಪಕ್ಷ ಕಾಂಗ್ರೆಸ್‌ ನೀಡುತ್ತಿರುವ ಅಸಹಕಾರದ್ದು ಎಂದು ವಿಪಕ್ಷಗಳು ಬಣ್ಣಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.