ನವದೆಹಲಿ:ಲೋಕಪಾಲ ಸಂಸ್ಥೆಯ ಕಚೇರಿ ದೆಹಲಿಯ ಪಂಚತಾರಾ ಹೋಟೆಲ್ನಿಂದ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಪಾಲ ಮುಖ್ಯಸ್ಥ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್, ಎಂಟು ಸದಸ್ಯರು ಹಾಗೂ ಉಳಿದ ಸಿಬ್ಬಂದಿಗೆ ಇಲ್ಲಿನ ಚಾಣಕ್ಯಪುರಿಯ ‘ದಿ ಅಶೋಕ್’ ಹೋಟೆಲ್ನಲ್ಲಿ ಕಚೇರಿ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರುಮಾರ್ಚ್ 23ರಂದುನ್ಯಾ.ಘೋಷ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.