ADVERTISEMENT

ಮೋದಿ ಮತ್ತೆ ಪ್ರಧಾನಿ: ಮುಲಾಯಂ ಆಶಯ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 14:30 IST
Last Updated 13 ಫೆಬ್ರುವರಿ 2019, 14:30 IST
ಲೋಕಸಭೆಯಲ್ಲಿ ಮುಲಾಯಂ ಸಿಂಗ್‌ ಕೈಮುಗಿದ ಕ್ಷಣ
ಲೋಕಸಭೆಯಲ್ಲಿ ಮುಲಾಯಂ ಸಿಂಗ್‌ ಕೈಮುಗಿದ ಕ್ಷಣ   

ನವದೆಹಲಿ: ನರೇಂದ್ರ ಮೋದಿ ಅವರು ಮುಂದಿನ ಬಾರಿಯೂ ಪ್ರಧಾನಿಯಾಗಲಿ ಎಂದು ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಹಾರೈಸಿದ್ದಾರೆ.

16ನೇ ಲೋಕಸಭೆಯ ಕೊನೆಯ ಅಧಿವೇಶನದಲ್ಲಿ ಅವರ ಈ ಮಾತು ಕೇಳಿದ ವಿರೋಧ ಪಕ್ಷಗಳ ಸದಸ್ಯರಿಗೆ ಅಚ್ಚರಿಯಾಯಿತು. ಆಡಳಿತ ಪಕ್ಷದ ಸದಸ್ಯರು ಮುಲಾಯಂ ಅವರ ಮಾತಿಗೆ ಮೇಜು ತಟ್ಟಿ ಸ್ವಾಗತಿಸಿದರು. ‘ಜೈ ಶ್ರೀರಾಮ್’ ಎಂಬ ಘೋಷಣೆಕೂಗಿದರು. ಮೋದಿ ಕೈಮುಗಿದು ನಮಿಸಿದರು.

‘ಎಲ್ಲರನ್ನೂ ಜೊತೆಗೆ ಕರೆದೊಯ್ದ ಮೋದಿ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಪ್ರಧಾನಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ’ ಎಂದ ಅವರು, ಸದನದ ಎಲ್ಲ ಸದಸ್ಯರೂ ಮತ್ತೊಮ್ಮೆ ಆರಿಸಿ ಬರಲಿ’ ಎಂದು ಆಶಯ ವ್ಯಕ್ತಪಡಿಸಿದರು.

ADVERTISEMENT

ಮುಲಾಯಂ ಮಾತಿಗೆ ಪ್ರತಿಕ್ರಿಯಿಸಿದ ಪ್ರಧಾನಿ, ‘ಮಾಡಬೇಕಾದ ಕೆಲಸಗಳು ಇನ್ನಷ್ಟು ಇವೆ. ಮುಲಾಯಂ ಅವರು ನಮಗೆ ಆಶೀರ್ವಾದ ಮಾಡಿದ್ದಾರೆ. ಅವರಿಗೆ ಧನ್ಯವಾದ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.