ADVERTISEMENT

ಉತ್ತರಾಖಂಡ ರಾಜ್ಯಪಾಲರಾಗಿ ಗುರುಮಿತ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಪಿಟಿಐ
Published 15 ಸೆಪ್ಟೆಂಬರ್ 2021, 7:43 IST
Last Updated 15 ಸೆಪ್ಟೆಂಬರ್ 2021, 7:43 IST
ಗುರ್ಮಿತ್ ಸಿಂಗ್‌ (ಟ್ವಿಟರ್‌ ಚಿತ್ರ)
ಗುರ್ಮಿತ್ ಸಿಂಗ್‌ (ಟ್ವಿಟರ್‌ ಚಿತ್ರ)   

ಡೆಹ್ರಾಡೂನ್‌: ಉತ್ತರಾಖಂಡ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್‌ ಗುರುಮಿತ್‌ ಸಿಂಗ್‌ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆರ್‌. ಎಸ್. ಚೌಹಾಣ್ ಅವರು ಪ್ರಮಾಣ ವಚನ ಬೋಧಿಸಿದರು.

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಗುರುಮಿತ್ ಸಿಂಗ್ ಅವರು ಸೇನೆಯಲ್ಲಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

ADVERTISEMENT

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಅವರ ಸಚಿವ ಸಂಪುಟ ಸಹೋದ್ಯೋಗಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್ ಎಸ್ ಸಂಧು ಮತ್ತು ಡಿಜಿಪಿ ಅಶೋಕ್ ಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಮೊದಲಿನ ರಾಜ್ಯಪಾಲರಾಗಿದ್ದ ಬೇಬಿ ರಾಣಿ ಮೌರ್ಯ ಅವರು ಈಚೆಗೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.