ADVERTISEMENT

ಗೋರಕ್ಷಕರ ಥಳಿತಕ್ಕೆ ಮತ್ತೊಂದು ಬಲಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2018, 19:30 IST
Last Updated 21 ಜುಲೈ 2018, 19:30 IST
   

ನವದೆಹಲಿ: ಹಸು ಕಳ್ಳ ಎಂಬ ಶಂಕೆಯ ಮೇಲೆ ರಾಜಸ್ಥಾನದ ಅಲ್ವರ್‌ನಲ್ಲಿ ಶುಕ್ರವಾರ ರಾತ್ರಿ ಅಕ್ಬರ್ ಖಾನ್ (25) ಎಂಬುವರನ್ನು ಸ್ವಯಂಘೋಷಿತ ಗೋರಕ್ಷಕರು ಹೊಡೆದು ಕೊಂದಿದ್ದಾರೆ.

ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ದಾಳಿಯನ್ನು ಮುಖ್ಯಮಂತ್ರಿ ವಸುಂಧರಾ ರಾಜೆ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಹಸುಕಳ್ಳರು ಎಂಬ ಶಂಕೆಯಲ್ಲಿ ಅಲ್ವರ್‌ನಲ್ಲಿ ಒಂದು ವರ್ಷದಲ್ಲಿ ಮೂವರನ್ನು ಹೊಡೆದು ಕೊಲ್ಲಲಾಗಿದೆ.2017ರ ಏಪ್ರಿಲ್ 3ರಂದು ಪೆಹ್ಲು ಖಾನ್‌ ಎಂಬುವರನ್ನು ಹೊಡೆದು ಕೊಲ್ಲಲಾಗಿತ್ತು. ಅದೇ ವರ್ಷ ನವೆಂಬರ್‌ನಲ್ಲಿ ಉಮರ್ ಖಾನ್ ಎಂಬ ವ್ಯಕ್ತಿಯನ್ನೂ ಹತ್ಯೆ ಮಾಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.