ಭೋಪಾಲ್: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮಧ್ಯಪ್ರದೇಶ ಸರ್ಕಾರ ನಿರ್ಣಯ ಕೈಗೊಂಡಿದೆ.
ಕಾಯ್ದೆಯ ರದ್ದತಿಗೆ ಆಗ್ರಹಿಸಲಾಗಿದ್ದು, ದೇಶದ ಸಂವಿಧಾನದ ಜಾತ್ಯತೀತ ತತ್ವಕ್ಕೆ ಈ ಕಾಯ್ದೆ ವಿರುದ್ಧವಾದದ್ದು ಎಂದು ಟೀಕಿಸಲಾಗಿದೆ.
ಮುಖ್ಯಮಂತ್ರಿ ಕಮಲನಾಥ್ ಅವರ ನೇತೃತ್ವದಲ್ಲಿ ಬುಧವಾರ ನಡೆದ ಮಧ್ಯಪ್ರದೇಶ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಪಿ.ಸಿ ಶರ್ಮಾ ತಿಳಿಸಿದ್ದಾರೆ.
ಈಗಾಗಲೇ ಕೇರಳ, ರಾಜಸ್ಥಾನ, ಪಶ್ಚಿಮ ಬಂಗಾಳ, ಪಂಜಾಬ್ ಸರ್ಕಾರಗಳು ಸಿಎಎ ವಿರುದ್ಧ ನಿರ್ಣಯ ಕೈಗೊಂಡಿವೆ. ಮಧ್ಯಪ್ರದೇಶದ ಸೇರ್ಪಡೆಯೊಂದಿಗೆ ಸಿಎಎ ವಿರುದ್ಧ ನಿರ್ಣಯ ಕೈಗೊಂಡ ರಾಜ್ಯಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸದ್ಯ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.