ಭೋಪಾಲ್: ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದು, ಆಡಳಿತಾರೂಢ ಪಕ್ಷದ ಶಾಸಕ ಅಜಯ್ ವಿಷ್ಣೋಯಿ ಈ ಸಂಬಂಧ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ಅವರಿಗೆ ಪತ್ರ ಬರೆದಿದ್ದಾರೆ.
‘ನನಗೆ ನಿಮ್ಮ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ, ಜನರಿಗೆ ಅದು ತಿಳಿಯುವುದಿಲ್ಲ.ನಿಮ್ಮ ನಿರ್ಧಾರದಿಂದ ಜಬಲ್ಪುರ ಮತ್ತು ರೇವಾ ಕ್ಷೇತ್ರದ ಜನರು ಅಸಮಾಧಾನಗೊಂಡಿದ್ದಾರೆ.ಈ ಎರಡು ಕ್ಷೇತ್ರಗಳ ಜನರನ್ನು ಸಮಾಧಾನ ಮಾಡುವ ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ನಿಮ್ಮನ್ನು ವಿನಂತಿಸುತ್ತೇನೆ. ನೀವು ನನ್ನ ಕೋರಿಕೆಯನ್ನು ಪರಿಗಣಿಸುತ್ತೀರಿ ಎಂದು ಭಾವಿಸುತ್ತೇನೆ’ ಎಂದು ಹೇಳಿದ್ದಾರೆ.
ಕಾಂಗ್ರೆಸ್ನಿಂದ ಪಕ್ಷಾಂತರಗೊಂಡು ಬಿಜೆಪಿ ಸಂಸದಾಗಿರುವಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ ಶಾಸಕರಿಗೂ ಸಂಪುಟದಲ್ಲಿ ಅವಕಾಶ ದೊರಕಿರುವ ಕುರಿತು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.
ವಿಷ್ಣೋಯಿ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಜಬಲ್ಪುರದ ಪಟಾನ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.