ADVERTISEMENT

ಮಧ್ಯಪ್ರದೇಶ|ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್‌ ಉರುಳಿ 11 ಮಂದಿ ಸಾವು

ಪಿಟಿಐ
Published 2 ಅಕ್ಟೋಬರ್ 2025, 15:19 IST
Last Updated 2 ಅಕ್ಟೋಬರ್ 2025, 15:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಂದೋರ್‌: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್‌ ಕೆರೆಗೆ ಉರುಳಿ 11 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಖಾಂಡವಾ ಜಿಲ್ಲೆಯಲ್ಲಿ ನಡೆದಿದೆ. 

ಹಲವು ಗ್ರಾಮಗಳ ದುರ್ಗಾ ಮೂರ್ತಿಗಳನ್ನು ವಿಜಯದಶಮಿಯಂದು ವಿಸರ್ಜಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳಿದಾಗ ಪಂಧನಾ ಪ್ರದೇಶದಲ್ಲಿ ಗುರುವಾರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು. 

ADVERTISEMENT

ಐದಾರು ಮಂದಿ ಬದುಕುಳಿದಿದ್ದಾರೆ. ಕಾರ್ಯಾಚರಣೆ ನಡೆಸಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆ ಕುರಿತು ತನಿಖೆ ಪ್ರಾರಂಭಿಸಲಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.