ADVERTISEMENT

ಪಿಎಂಜಿಕೆವೈ ಅಡಿಯಲ್ಲಿ 4.9 ಕೋಟಿ ಜನರಿಗೆ ಉಚಿತ ಅಕ್ಕಿ: ಮಧ್ಯಪ್ರದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಆಗಸ್ಟ್ 2021, 10:46 IST
Last Updated 7 ಆಗಸ್ಟ್ 2021, 10:46 IST
ಶಿವರಾಜ್ ಸಿಂಗ್ ಚೌಹಾಣ್ (ಪಿಟಿಐ ಚಿತ್ರ)
ಶಿವರಾಜ್ ಸಿಂಗ್ ಚೌಹಾಣ್ (ಪಿಟಿಐ ಚಿತ್ರ)   

ಭೋಪಾಲ್:‌ಮಧ್ಯಪ್ರದೇಶಸರ್ಕಾರವು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯ (ಪಿಎಂಜಿಕೆವೈ) ಅಡಿಯಲ್ಲಿ ರಾಜ್ಯದಾದ್ಯಂತ 4.9 ಕೋಟಿ ಬಡವರಿಗೆ ಉಚಿತ ಅಕ್ಕಿ ವಿತರಿಸುವ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಿದೆ.

ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರುಪಿಎಂಜಿಕೆವೈ ಕಾರ್ಯಕ್ರಮದವೇಳೆ ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆಯೂ ಮಾತನಾಡಿದರು. ಪಿಎಂಜಿಕೆವೈ ಅಡಿಯಲ್ಲಿ ವಿತರಿಸುವ ಪಡಿತರ ಮಾತ್ರವಲ್ಲದೆ, ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ತಲಾ50ಕೆಜಿ ಆಹಾರ ಪದಾರ್ಥಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ʼಸರ್ಕಾರವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ46,000 ಜನರನ್ನು ರಕ್ಷಿಸಿದ್ದು,20,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆʼ ಎಂದು ಸಿಎಂಮಾಹಿತಿ ನೀಡಿದರು.

ADVERTISEMENT

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ ಹಣಕಾಸಿನ ನೆರವು ನೀಡಲಾಗುವುದು. ಇದಲ್ಲದೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಪಿಎಂಎವೈಅಡಿಯಲ್ಲಿ 6,000 ರೂಪಾಯಿಗಳ ಹಣಕಾಸಿನ ನೆರವು ನೀಡುತ್ತೇವೆʼ ಎಂದೂ ಹೇಳಿದರು.

ರಾಜ್ಯದ ಅಧಿಕಾರಿಗಳ ಪ್ರಕಾರ, ಗ್ವಾಲಿಯರ್ ಮತ್ತು ಚಂಬಲ್ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನಅಸ್ತವ್ಯಸ್ತಗೊಂಡಿದ್ದು,ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಪ್ರಧಾನಿ ಮೋದಿ ಅವರುಇಂದು ಮಧ್ಯಪ್ರದೇಶದಲ್ಲಿರುವ ಪಿಎಂಜಿಕೆವೈ ಫಲಾನುಭವಿಗಳೊಂದಿಗೆ ವರ್ಚುವಲ್‌ ಸಂವಾದ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.