ಭೋಪಾಲ್: ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಗಳು ಅಲ್ಲಿನ ಸ್ಥಳೀಯರಿಗೆ ಮಾತ್ರ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ಚೌಹಾಣ್ ಮಂಗಳವಾರಘೋಷಿಸಿದ್ದಾರೆ.
ಮಧ್ಯಪ್ರದೇಶ ಸರ್ಕಾರ ಇವತ್ತು ಮುಖ್ಯ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ರಾಜ್ಯದ ಯುವಜನಾಂಗಕ್ಕೆ ಮಾತ್ರ ಸರ್ಕಾರಿ ಕೆಲಸ ನೀಡುವಂತೆ ಮಾಡಲು ನಾವು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಮಧ್ಯಪ್ರದೇಶದ ಸಂಪನ್ಮೂಲಗಳು ಇಲ್ಲಿನ ಮಕ್ಕಳಿಗಾಗಿ ಮಾತ್ರ ಎಂದು ಶಿವರಾಜ್ ಚೌಹಾಣ್ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
ಸರ್ಕಾರಿ ಕೆಲಸ ನೀಡುವಾಗ ಮಧ್ಯಪ್ರದೇಶದವರಿಗೆ ಆದ್ಯತೆ ನೀಡಲಾಗುವುದು.ಹತ್ತು ಮತ್ತು ಹನ್ನೆರಡನೇ ತರಗತಿಯ ಅಂಕಗಳನ್ನು ಆಧರಿಸಿ ಸ್ಥಳೀಯ ಯುವಕರಿಗೆ ನೌಕರಿ ನೀಡುವ ಕ್ರಮ ಆರಂಭಿಸಲಾಗುವುದು ಎಂದು ಚೌಹಾಣ್ ಈ ಹಿಂದೆ ಹೇಳಿದ್ದರು.
ಮಧ್ಯಪ್ರದೇಶದ ಯುವಕರಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ ನೀಡಲಾಗುವುದು. ಉದ್ಯೋಗವಕಾಶಗಳು ಕಡಿಮೆಯಾಗುತ್ತಿರುವ ಹೊತ್ತಲ್ಲಿ ನಮ್ಮ ಯುವಕರ ಬಗ್ಗೆ ಕಾಳಜಿ ವಹಿಸಬೇಕಾದುದುನಮ್ಮ ಕರ್ತವ್ಯ ಎಂದು ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಜನರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಚೌಹಾಣ್ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.