ADVERTISEMENT

ಮಧ್ಯ ಪ್ರದೇಶ ರಾಜಕೀಯ: 12 ಗಂಟೆಗೆ ಸಿಎಂ ಕಮಲ್ ನಾಥ್ ಪತ್ರಿಕಾಗೋಷ್ಠಿ

ಏಜೆನ್ಸೀಸ್
Published 20 ಮಾರ್ಚ್ 2020, 5:38 IST
Last Updated 20 ಮಾರ್ಚ್ 2020, 5:38 IST
ಕಮಲ್ ನಾಥ್ (ಸಂಗ್ರಹ ಚಿತ್ರ)
ಕಮಲ್ ನಾಥ್ (ಸಂಗ್ರಹ ಚಿತ್ರ)   

ಭೋಪಾಲ್: ಮಧ್ಯ ಪ್ರದೇಶ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಕಮಲ್ ನಾಥ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 5 ಗಂಟೆ ಒಳಗೆ ವಿಶ್ವಾಸಮತ ಸಾಬೀತು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್‌ ಗುರುವಾರ ಮಧ್ಯ ಪ್ರದೇಶ ವಿಧಾನಸಭೆ ಸ್ಪೀಕರ್‌ಗೆ ಆದೇಶ ನೀಡಿತ್ತು. ಅಗತ್ಯ ಸಂಖ್ಯಾಬಲ ಇಲ್ಲದಿರುವುದರಿಂದ ಕಮಲನಾಥ್ ರಾಜೀನಾಮೆ ನೀಡಲಿದ್ದಾರೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿಗ್ವಿಜಯ್ ಸಿಂಗ್, ‘ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಅಲ್ಲಿವರೆಗೂ ಕಾಯಿರಿ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿಗೆ ಸಂಬಂಧಿಸಿ ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಮಲನಾಥ್ ಗುರುವಾರ ಹೇಳಿದ್ದರು. ಹೀಗಾಗಿ ಅವರ ಮುಂದಿನ ನಡೆ ಏನು ಎಂಬುದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸುವ ನಿರೀಕ್ಷೆ ಇದೆ.

ADVERTISEMENT

ಕಮಲ್‌ನಾಥ್‌ ವಿರುದ್ಧ ಬಂಡೆದ್ದಿರುವ 22 ಶಾಸಕರು ಕಾಂಗ್ರೆಸ್‌ ತ್ಯಜಿಸಿ, ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಬೆಂಬಲಿಸಿ ಬಿಜೆಪಿಗೆ ಸೇರಲು ಸಿದ್ಧತೆ ನಡೆಸಿದ್ದಾರೆ. ಈ ಪೈಕಿ ಅನೇಕ ಶಾಸಕರು ಬೆಂಗಳೂರಿನ ಯಲಹಂಕದ ರಮಡ ಹೊಟೇಲ್‌ನಲ್ಲಿ ತಂಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.