ADVERTISEMENT

ಬಾದಾಮ್‌ ಕದ್ದ ಆರೋಪ: ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಅರ್ಚಕ

ಪಿಟಿಐ
Published 10 ಸೆಪ್ಟೆಂಬರ್ 2022, 10:41 IST
Last Updated 10 ಸೆಪ್ಟೆಂಬರ್ 2022, 10:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸಾಗರ್‌: ನೈವೇದ್ಯಕ್ಕಿಟ್ಟಿದ್ದ ಬಾದಾಮ್‌ ಕದ್ದ ಆರೋಪದಲ್ಲಿ 11 ವರ್ಷದ ಬಾಲಕನನ್ನು ಮಧ್ಯಪ್ರದೇಶದ ಸಾಗರ್‌ನ ಜೈನ ಮಂದಿರದ ಅರ್ಚಕರೊಬ್ಬರು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಾಲಕನ ತಂದೆ ನೀಡಿರುವ ದೂರಿನ ಅನ್ವಯ ಸಿದ್ದಾಯ್ತನ್‌ ಜೈನ ಮಂದಿರದ ಅರ್ಚಕ ರಾಕೇಶ್‌ ಜೈನ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಾಲಕನನ್ನು ಮರಕ್ಕೆ ಕಟ್ಟಿಹಾಕಿರುವ ಮತ್ತು ಆತ ಸಹಾಯಕ್ಕಾಗಿ ಗೋಗರೆಯುತ್ತಿರುವ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ADVERTISEMENT

ಬಾಲಕನನ್ನು ಮರಕ್ಕೆ ಕಟ್ಟಿಹಾಕಲು ಇನ್ನೊಬ್ಬ ವ್ಯಕ್ತಿ ಕೂಡ ಸಹಾಯ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆರ್ಚಕನ ವಿರುದ್ಧ ಜಾತಿನಿಂದನೆ ಪ್ರಕರಣವೂ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.