ADVERTISEMENT

ಆರ್‌ಎಸ್ಎಸ್ ಪಥಸಂಚಲನಕ್ಕೆ ಅವಕಾಶ ನೀಡಿ: ತಮಿಳುನಾಡು ಪೊಲೀಸರಿಗೆ ಹೈಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 14:21 IST
Last Updated 30 ಸೆಪ್ಟೆಂಬರ್ 2022, 14:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚೆನ್ನೈ: ನವೆಂಬರ್‌ 6ರಂದು ಪಥಸಂಚಲನ ನಡೆಸಲುರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್‌ಎಸ್‌ಎಸ್‌) ಅವಕಾಶ ನೀಡುವಂತೆ ತಮಿಳುನಾಡು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ಗಾಂಧಿ ಜಯಂತಿ ದಿನ (ಅಕ್ಟೋಬರ್‌ 2ರಂದು) ಆರ್‌ಎಸ್‌ಎಸ್‌ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ,ಆರ್‌ಎಸ್‌ಎಸ್‌ ತಿರುವಳ್ಳೂರ್‌ ಜಿಲ್ಲಾ ಜಂಟಿ ಕಾರ್ಯದರ್ಶಿ ಆರ್‌. ಕಾರ್ತಿಕೇಯನ್‌ ಮೇಲ್ಮನವಿಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಕೆ.ಇಳಂಥಿರಾಯನ್‌ ಅವರಿದ್ದ ಪೀಠ ಪೊಲೀಸರಿಗೆ ನಿರ್ದೇಶನ ನೀಡಿದೆ.

ಆರ್‌ಎಸ್‌ಎಸ್‌ಅಕ್ಟೋಬರ್‌ 2ರಂದು ನಡೆಸಲು ಯೋಜಿಸಿದ್ದ ಪಥ ಸಂಚಲನಕ್ಕೆ ಹಾಗೂ ಅದೇ ದಿನ ವಿಡುದಲೈ ಚಿರುತೈಗಳ್‌ ಕಟ್ಚಿ (ವಿಸಿಕೆ) ಆಯೋಜಿಸಿದ್ದ ಪ್ರತಿಭಟನೆಗೆ ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿತ್ತು.

ಅದರ ಬೆನ್ನಲ್ಲೇತಮಿಳುನಾಡು ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ರಾಜ್ಯದಾದ್ಯಂತ 50 ಕಡೆಗಳಲ್ಲಿ ನಡೆಸಲು ಉದ್ದೇಶಿಸಿದ್ದ ಆರ್‌ಎಸ್‌ಎಸ್‌ ಪಥಸಂಚಲಕ್ಕೆ ಅನುಮತಿ ನಿರಾಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.