ADVERTISEMENT

ಮದ್ರಾಸ್‌ ಸಿಜೆ ರಾಜೀನಾಮೆ ಅಂಗಿಕಾರ

ಪಿಟಿಐ
Published 21 ಸೆಪ್ಟೆಂಬರ್ 2019, 19:38 IST
Last Updated 21 ಸೆಪ್ಟೆಂಬರ್ 2019, 19:38 IST
   

ನವದೆಹಲಿ: ಮದ್ರಾಸ್‌ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ವಿ.ಕೆ.ತಾಹಿಲ್‌ರಮಣಿ ಅವರ ರಾಜೀನಾಮೆಯನ್ನು ಸರ್ಕಾರ ಅಂಗೀಕರಿಸಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಮೇಘಾಲಯ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಆದೇಶವನ್ನು ಮರುಪರಿಶೀಲಿಸುವಂತೆಕೋರಿ ತಾಹಿಲ್‌ರಮಣಿ ಅವರು ಸುಪ್ರೀಂ ಕೋರ್ಟ್‌ ಕೊಲೀಜಿಯಂಗೆ ಮನವಿ ಸಲ್ಲಿಸಿದ್ದರು. ಆದರೆ ಮನವಿ ತಿರಸ್ಕೃತವಾದ ಕಾರಣ ಸೆ.6ರಂದು ಅವರುಮುಖ್ಯನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಮದ್ರಾಸ್‌ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿ.ಕೊಠಾರಿ ಅವರನ್ನು ನೇಮಿಸಿ ಮತ್ತೊಂದು ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT