ಮುಂಬೈ: ಮಹಾರಾಷ್ಟ್ರದ ಬುಲ್ಡಾಣಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗಿನ ಜಾವ ಸರ್ಕಾರಿ ಬಸ್ ಮತ್ತು ಕಂಟೇನರ್ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ.
ರಾಜಧಾನಿ ಮುಂಬೈನಿಂದ 450 ಕಿ.ಮೀ ದೂರದ ಹಳೆ ಮುಂಬೈ- ನಾಗ್ಪುರ ಹೆದ್ದಾರಿಯ ಸಿಂಧ್ಖೇಡ್ ರಾಜಾ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್, ಪುಣೆಯಿಂದ ಬುಲ್ಡಾಣಾದ ಮೆಹ್ಕರ್ ಕಡೆಗೆ ಸಂಚರಿಸುತ್ತಿತ್ತು.
‘ದುರ್ಘಟನೆಯಲ್ಲಿ 6 ಮಂದಿ ಮೃತಪಟ್ಟು, 10 ಜನರು ಗಾಯಗೊಂಡಿದ್ದಾರೆ’ ಎಂದೂ ಅಧಿಕಾರಿ ಹೇಳಿದ್ದಾರೆ.
ಮೃತರಲ್ಲಿ ನಾಲ್ವರು ಬಸ್ ಪ್ರಯಾಣಿಕರು, ಎರಡೂ ವಾಹನಗಳ ಚಾಲಕರು ಸೇರಿದ್ದಾರೆ.
ಗಾಯಾಳುಗಳನ್ನು ಸಿಂಧ್ಖೇಡ್ ರಾಜಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.