ADVERTISEMENT

ಅರ್ನಬ್‌ ಆರೋಗ್ಯ, ಭದ್ರತೆ ವಿಚಾರಿಸಿದ ಮಹಾರಾಷ್ಟ್ರ ರಾಜ್ಯಪಾಲ

ಗೃಹಸಚಿವ ಅನಿಲ್ ದೇಶ್‌ಮುಖ್ ಜತೆ ದೂರವಾಣಿ ಮಾತುಕತೆ

ಪಿಟಿಐ
Published 9 ನವೆಂಬರ್ 2020, 12:23 IST
Last Updated 9 ನವೆಂಬರ್ 2020, 12:23 IST
ಅರ್ನಬ್ ಗೋಸ್ವಾಮಿ
ಅರ್ನಬ್ ಗೋಸ್ವಾಮಿ   

ಮುಂಬೈ: ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಭದ್ರತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್ ಕೋಶಯಾರಿ ಅವರು ಗೃಹಸಚಿವ ಅನಿಲ್ ದೇಶ್‌ಮುಖ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಅರ್ನಬ್ ಅವರನ್ನು ಭೇಟಿ ಮಾಡಿ ಮಾತನಾಡಲು ಅವರ ಕುಟುಂಬಕ್ಕೆ ಅವಕಾಶ ನೀಡಬೇಕೆಂದು ರಾಜ್ಯಪಾಲರು ಗೃಹಸಚಿವರಿಗೆ ಸೂಚಿಸಿದ್ದಾರೆ ಎಂದು ರಾಜ್ಯಪಾಲರ ಕಚೇರಿಯ ಪ್ರಕಟಣೆ ಸೋಮವಾರ ತಿಳಿಸಿದೆ.

ಅರ್ನಬ್ ಬಂಧನದ ರೀತಿಯ ಕುರಿತು ರಾಜ್ಯಪಾಲರು, ಗೃಹಸಚಿವರಲ್ಲಿ ತಮ್ಮ ಕಳವಳ ವ್ಯಕ್ತಪಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.