ಉತ್ತರ ಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ವೇಳೆ ಕಾಲ್ತುಳಿತ ಅವಘಡ ಸಂಭವಿಸಿದೆ.
(ಪಿಟಿಐ ಚಿತ್ರ)
ಮಹಾಕುಂಭಮೇಳದ ಎರಡನೇ ‘ಪವಿತ್ರ ಸ್ನಾನ’ ದಿನವಾದ ಮೌನಿ ಅಮಾವಾಸ್ಯೆಯಂದು ಕಾಲ್ತುಳಿತ ಅವಘಡ ಸಂಭವಿಸಿದೆ.
ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.
ಘಟನೆಯಲ್ಲಿ ಹಲವರು ಮೃತಪಟ್ಟಿರುವ ಶಂಕೆ ಇದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.
ಮಹಾಕುಂಭಮೇಳದಲ್ಲಿ ಕಾಲ್ತುಳಿತ: ರಕ್ಷಣಾ ಕಾರ್ಯಾಚರಣೆ
ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೃತಪಟ್ಟವರ ಬಗ್ಗೆ ಇನ್ನಷ್ಟೇ ಖಚಿತವಾಗಬೇಕಿದೆ.
ಕಾಲ್ತುಳಿತ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಮುಗಿಲು ಮುಟ್ಟಿದ ಆಕ್ರಂದನ
ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸಿದ ಸಾಧು, ಸಂತರು
ಜನಸ್ತೋಮವನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.