ಮುಂಬೈ: ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿರುವ ಏಕನಾಥ್ ಶಿಂಧೆ ಅವರು ಕಲಾ ವಿಭಾಗದಲ್ಲಿ ಶೇ 77.25 ಅಂಕ ಪಡೆದು ಪದವಿಯನ್ನು ಪಡೆದಿದ್ದಾರೆ ಎಂದು ಅವರ ಪುತ್ರ, ಲೋಕಸಭಾ ಸಂಸದ ಶ್ರೀಕಾಂತ್ ಅವರು ಮಂಗಳವಾರ ಘೋಷಿಸಿದ್ದಾರೆ.
‘ಯುವಕರಾಗಿದ್ದ ಸಂದರ್ಭದಲ್ಲಿ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಅಧ್ಯಯನವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದ ತಂದೆಯವರು, ಇದೀಗ ಯಶವಂತರಾವ್ ಚೌವಾಣ್ ಮಹಾರಾಷ್ಟ್ರ ಮುಕ್ತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಜೀವನದಲ್ಲಿ ಕಠಿಣ ಪರಿಶ್ರಮದಿಂದ ಕಾರ್ಯನಿರ್ವಹಿಸಿದರೆ ಯಾರು ಯಾವಾಗ ಬೇಕಿದ್ದರೂ ಯಶಸ್ಸು ಸಾಧಿಸಬಹುದು ಎನ್ನುವುದಕ್ಕೆ ನನ್ನ ತಂದೆಯ ಫಲಿತಾಂಶವೇ ಸಾಕ್ಷಿ’ ಎಂದು ಶ್ರೀಕಾಂತ್ ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.