ADVERTISEMENT

ಮಹದಾಯಿ ಡಿಪಿಆರ್: ಗೋವಾ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2023, 18:56 IST
Last Updated 13 ಫೆಬ್ರುವರಿ 2023, 18:56 IST
   

ನವದೆಹಲಿ: ಮಹದಾಯಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌) ಕೇಂದ್ರ ಜಲ ಆಯೋಗ ಅನುಮೋದನೆ ನೀಡಿರು ವುದನ್ನು ಪ್ರಶ್ನಿಸಿ ಗೋವಾ ಸರ್ಕಾರ ಸಲ್ಲಿಸಿರುವ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ಎಂ.ಎಂ. ಸುಂದರೇಶ್ ಅವರಿದ್ದ ದ್ವಿ ಸದಸ್ಯ ಪೀಠವು ಅರ್ಜಿ ವಜಾ ಗೊಳಿಸಿತು.

‘ಎಲ್ಲ ಶಾಸನಬದ್ಧ ಅನುಮತಿಗಳನ್ನು ಪಡೆದೇ ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಕೋರ್ಟ್‌ ಪುನರುಚ್ಚರಿಸಿದೆ’ ಎಂದು ಗೋವಾ ಸಿ.ಎಂ ಪ್ರಮೋದ್‌ ಸಾವಂತ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT