ADVERTISEMENT

ಮಹಾರಾಷ್ಟ್ರ| ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ: ನಾಲ್ಕು ಕಾರ್ಮಿಕರಿಗೆ ಗಾಯ

ಪಿಟಿಐ
Published 12 ಫೆಬ್ರುವರಿ 2023, 13:48 IST
Last Updated 12 ಫೆಬ್ರುವರಿ 2023, 13:48 IST
.
.   

ಠಾಣೆ: ‘ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಬದ್ಲಾಪುರದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (ಎಂಐಡಿಸಿ) ಮಧ್ಯಾಹ್ನ 12.50ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಕುಲ್ಗಾಂವ್‌ ಪುರಸಭೆ ಹಾಗೂ ಆನಂದ್‌ನಗರ ಎಂಐಡಿಸಿಯ ನಾಲ್ಕು ಅಗ್ನಿ ಶಾಮಕ ದಳ ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದರು.

‘ಮೂವರ ಪರಿಸ್ಥಿತಿ ಸ್ಥಿರವಾಗಿದೆ. ಮತ್ತೊಬ್ಬ ಕಾರ್ಮಿಕನ ದೇಹವು ಶೇ 15ರಿಂದ 30ರಷ್ಟು ಸುಟ್ಟುಹೋಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದೂ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.