ADVERTISEMENT

ಮಹಾರಾಷ್ಟ್ರ: ದಲಿತ ಮಹಿಳೆಗೆ ಬೆಂಕಿ, ಸ್ಥಿತಿ ಗಂಭೀರ

ಪಿಟಿಐ
Published 5 ಫೆಬ್ರುವರಿ 2020, 15:38 IST
Last Updated 5 ಫೆಬ್ರುವರಿ 2020, 15:38 IST

ಔರಂಗಾಬಾದ್: ದಲಿತ ಮಹಿಳೆಯೊಬ್ಬರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಅಂಧಾರಿ ಗ್ರಾಮದಲ್ಲಿ ನಡೆದಿದೆ.

‘ಏಕಾಂಗಿಯಾಗಿ ವಾಸಿಸುತ್ತಿದ್ದ ಐವತ್ತು ವರ್ಷದ ದಲಿತ ಮಹಿಳೆ ಮನೆಗೆ ಅದೇ ಗ್ರಾಮದ ಸಂತೋಷ್ ಮೊಹಿತೆ ಎಂಬಾತ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ. ಆದರೆ, ಮಹಿಳೆ ಆತನಿಗೆ ಅವಕಾಶ ನೀಡಿರಲಿಲ್ಲ. ಇದೇ ಕಾರಣಕ್ಕೆ ಆತ ಮಹಿಳೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಶೇ 90ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.