ನಂದುರ್ಬಾರ್: ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ನರ್ಮದಾ ನದಿಯಲ್ಲಿ ದೋಣಿ ಮಗುಚಿ ಆರು ಮಂದಿ ಮೃತಪಟ್ಟಿದ್ದಾರೆ.
ದೋಣಿಯಲ್ಲಿ ಒಟ್ಟು 60 ಮಂದಿ ಇದ್ದರು. ಮಕರ ಸಂಕ್ರಾಂತಿ ಅಂಗವಾಗಿ ನದಿಯಲ್ಲಿ ಪೂಜೆ ಮಾಡಲು ಇವರೆಲ್ಲ ತೆರಳುತ್ತಿದ್ದರು.
36 ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ತೆರಳಿದ್ದೇಘಟನೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.