ADVERTISEMENT

ಮಹಾರಾಷ್ಟ್ರ: 9,11ನೇ ತರಗತಿಯಲ್ಲಿ ಅನುತ್ತೀರ್ಣರಾದವರಿಗೆ ಎರಡನೇ ಅವಕಾಶ

ಪಿಟಿಐ
Published 23 ಜುಲೈ 2020, 9:00 IST
Last Updated 23 ಜುಲೈ 2020, 9:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: 9 ಮತ್ತು 11ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ‌ ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಎರಡನೇ ಅವಕಾಶ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಈ ವಿದ್ಯಾರ್ಥಿಗಳಿಗೆ ಆ.7 ರಂದು ಮೌಖಿಕ ಪರೀಕ್ಷೆ ನಡೆಸುವಂತೆ ಶಾಲೆಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.

ಕೊರೊನಾ ಪಿಡುಗಿನ ಸಂದರ್ಭವಾದ್ದರಿಂದ ‌ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಹಾಗಾಗಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮೌಖಿಕ ಪರೀಕ್ಷೆ ನಡೆಸುವಂತೆ ಸರ್ಕಾರ ಹೇಳಿದ್ದು, ಮೌಖಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು 2020–21ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು 12ನೇ ತರಗತಿಗೆ ದಾಖಲಿಸುವಂತೆ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.