ಮುಂಬೈ: ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಜುಲೈ 4ರಂದು ವಿಶ್ವಾಸಮತ ಯಾಚಿಸಲಿದ್ದಾರೆ.
ಶಿಂಧೆ ಅವರು ಮುಖ್ಯಮಂತ್ರಿಯಾಗಿ ಹಾಗೂ ದೇವೇಂದ್ರ ಫಡಣವೀಸ್ ಅವರು ಉಪಮುಖ್ಯಮಂತ್ರಿಯಾಗಿ ಜೂನ್ 30ರಂದು ಪ್ರಮಾಣವಚನ ಸ್ವೀಕರಿಸಿದ್ದರು.
ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಜೊತೆಗಿರುವ ಶಿವಸೇನಾದ 39 ಶಾಸಕರು ಸೇರಿದಂತೆ 50 ಶಾಸಕರು ಶನಿವಾರವೇ ಗೋವಾದಿಂದ ಮುಂಬೈಗೆ ತಲುಪಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.