ಪಾಲ್ಘರ್: ಸ್ಕೂಟರ್ ಸವಾರನ ಮೇಲೆ ಬಾಲಕನೊಬ್ಬ ವಾಟರ್ ಬಲೂನ್ ಎಸೆದ ಪರಿಣಾಮ ಸಂಭವಿಸಿದ ಸರಣಿ ಅಪಘಾತದಲ್ಲಿ 54 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ.
ಹೋಳಿ ಹಬ್ಬದ ಕಾಮ ದಹನಕ್ಕಾಗಿ ಕಟ್ಟಿಗೆ ಕೊಂಡೊಯ್ಯುತ್ತಿದ್ದ ಟ್ರಕ್ನಲ್ಲಿದ್ದ ಬಾಲಕನೊಬ್ಬ ಸ್ಕೂಟರ್ ಮೇಲೆ ಹೋಗುತ್ತಿದ್ದ ವ್ಯಕ್ತಿ ಮೇಲೆ ನೀರು ತುಂಬಿದ ಬಲೂನ್ ಎಸೆದಿದ್ದಾನೆ. ಈ ಸಂದರ್ಭ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಚಾಲಕ ಬೇರೆ ಸೈಕಲ್ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ನಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿ ಸಾವಿಗೀಡಾಗಿದ್ದಾರೆ.
ಗುರುವಾರ ರಾತ್ರಿ ವಿರರ್ ಪ್ರದೇಶದ ಅಗಶಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ರಾಮಚಂದ್ರ ಪಟೇಲ್ ಎಂದು ಗುರುತಿಸಲಾಗಿದೆ.
‘ಹೋಳಿ ಹಬ್ಬದ ಕಾಮ ದಹನಕ್ಕಾಗಿ ಕಟ್ಟಿಗೆ ಕೊಂಡೊಯ್ಯುತ್ತಿದ್ದ ಟ್ರಕ್ನಲ್ಲಿದ್ದ ಬಾಲಕನೊಬ್ಬ ನೀರಿನ ಬಲೂನ್ ಎಸೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಪಟೇಲ್ ಅವರ ಸೈಕಲ್ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಪಟೇಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತಂತೆ ತನಿಖೆ ನಡೆಯುತ್ತಿದೆ’ ಎಂದು ಅರ್ನಾಳಾ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.