ADVERTISEMENT

ಗಡಿ ವಿವಾದಕ್ಕೆ ಬೊಮ್ಮಾಯಿ ಟ್ವೀಟ್‌ಗಳೇ ಕಾರಣ: ಅಮಿತ್‌ ಶಾಗೆ ಶಿಂದೆ ದೂರು

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2022, 1:51 IST
Last Updated 15 ಡಿಸೆಂಬರ್ 2022, 1:51 IST
ಏಕನಾಥ ಶಿಂದೆ
ಏಕನಾಥ ಶಿಂದೆ   

ನವದೆಹಲಿ: ಗಡಿ ವಿವಾದವು ಹಿಂಸಾರೂಪ ಪಡೆಯಲು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ ಪ್ರಚೋದನಕಾರಿ ಟ್ವೀಟ್‌ಗಳೇ ಕಾರಣ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಬುಧವಾರ ದೂರಿದ್ದಾರೆ.

ಶಾ ಅಧ್ಯಕ್ಷತೆಯಲ್ಲಿ ನಡೆದ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಶಿಂದೆ ಅವರು ಬೊಮ್ಮಾಯಿ ವಿರುದ್ಧ ದೂರಿದರು ಎಂದು ಮೂಲಗಳು ಹೇಳಿವೆ.

‘ಗಡಿ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ ಅಂತಿಮ ತೀರ್ಪು ನೀಡುವವರೆಗೆ ಯಾರೂ ಆರೋಪ–ಪ್ರತ್ಯಾರೋಪಗಳನ್ನು ಮಾಡಬಾರದು’ ಎಂಬುದಾಗಿ ಶಾ ಅವರು ಇಬ್ಬರೂ ಮುಖ್ಯಮಂತ್ರಿಗಳಿಗೆ ತಾಕೀತು ಮಾಡಿದರು ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.