ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪೋಸ್ಟರ್ಗಳಿಗೆ ಶಿವಸೇನಾ ಬಂಡಾಯ ಶಾಸಕ ಏಕನಾಥ ಶಿಂಧೆ ಅವರ ಬೆಂಬಲಿಗರು ಕಪ್ಪು ಬಣ್ಣ ಬಳಿದಿದ್ದಾರೆ.
ಸದ್ಯ ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಉದ್ಧವ್ ಠಾಕ್ರೆ ಪೋಸ್ಟರ್ಗಳಿಗೆ ಕಪ್ಪು ಬಣ್ಣ ಬಳಿದಿರುವ ಘಟನೆ ರಾಜಕೀಯ ವಲಯದಲ್ಲಿ ಪರ –ವಿರೋಧದ ಚರ್ಚೆಗೆ ಕಾರಣವಾಗಿದೆ.
ಗುವಾಹಟಿಯ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಬೀಡುಬಿಟ್ಟಿರುವ ಶಿವಸೇನಾದ ಬಂಡಾಯ ಶಾಸಕರೊಂದಿಗೆ ಗುಂಪಿನ ನಾಯಕ ಏಕನಾಥ ಶಿಂಧೆ ಅವರು ಇಂದು ಸಭೆ ನಡೆಸಿದ್ದು, ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏಕನಾಥ ಶಿಂಧೆ ಅವರ ನಡೆ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.