ಪುಣೆ: ಅಧಿಕೃತ ಕೆಲಸಕ್ಕೆ ಸಂಬಂಧಿಸಿದ ದೂರವಾಣಿ ಕರೆಗಳಿಗೆ ಉತ್ತರಿಸುವ ಮೊದಲು ಹಲೊ ಬದಲು ‘ವಂದೇ ಮಾತರಂ’ ಎಂಬುದಾಗಿ ಹೇಳಬೇಕು ಎಂದುಮಹಾರಾಷ್ಟ್ರ ಸರ್ಕಾರದ ಅರಣ್ಯ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ಸಂಸ್ಕೃತಿ ಮತ್ತು ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಅವರು, ಕಚೇರಿಗಳಲ್ಲಿ ದೂರವಾಣಿ ಕರೆಗಳನ್ನು ಸ್ವೀಕರಿಸುವಾಗ ‘ಹಲೊ’ ಬದಲಿಗೆ ‘ವಂದೇ ಮಾತರಂ’ ಹೇಳುವಂತೆ ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಬೆನ್ನಲ್ಲೇಈ ಆದೇಶ ಹೊರಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.