ನವದೆಹಲಿ: ಮಹಾರಾಷ್ಟ್ರ ರಾಜ್ಯಪಾಲ ಭಗತ್ಸಿಂಗ್ ಕೋಶಿಯಾರಿ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ರಾಧಾಕೃಷ್ಣ ಮಾಥುರ್ ಅವರು ರಾಜೀನಾಮೆ ನೀಡಿದ್ದಾರೆ.
ಕೋಶಿಯಾರಿ ಮತ್ತು ರಾಧಾಕೃಷ್ಣ ಮಾಥುರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಈ ಎರಡು ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡಲಾಗಿದೆ.
ಮಹಾರಾಷ್ಟ್ರ ರಾಜ್ಯಪಾಲರಾಗಿ ರಮೇಶ್ ಬೈಸ್ ಹಾಗೂ ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ಬಿ.ಡಿ ಮಿಶ್ರಾ ಅವರನ್ನು ನೇಮಿಸಲಾಗಿದೆ.
ಈ ಹಿಂದೆ ರಮೇಶ್ ಬೈಸ್ ಅವರು ಜಾರ್ಖಂಡ್ ರಾಜ್ಯಪಾಲರಾಗಿದ್ದರು, ಬಿ.ಡಿ. ಮಿಶ್ರಾ ಅವರು ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.