ADVERTISEMENT

ಮುಂಗಾರು ಪ್ರವಾಸೋದ್ಯಮಕ್ಕೆ ಆದ್ಯತೆ: ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 7:56 IST
Last Updated 26 ಸೆಪ್ಟೆಂಬರ್ 2021, 7:56 IST
ಆದಿತ್ಯ ಠಾಕ್ರೆ
ಆದಿತ್ಯ ಠಾಕ್ರೆ   

ಮುಂಬೈ: ಕೊಂಕಣ ವಲಯದಲ್ಲಿ ಮುಂಗಾರು ಪ್ರವಾಸೋದ್ಯಮ ಚಟುವಟಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ಕಾರ್ಯತತ್ಪರವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಹೇಳಿದರು.

ಅಲ್ಲದೆ, ಪೌರಾಣಿಕ ಚಲನಚಿತ್ರಗಳು ಮತ್ತು ಪ್ರಸಿದ್ಧ ಚಿತ್ರಕಥೆಗಳನ್ನು ಒಳಗೊಂಡ ಸಂಗ್ರಹಾಲಯಗಳ ಸ್ಥಾಪನೆ ಮೂಲಕ ರಾಜ್ಯವನ್ನು ಒಂದು ಚಲನಚಿತ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು.

ಸೆಪ್ಟೆಂಬರ್‌ 27ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಮುನ್ನ ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಖಾಸಗಿ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡಲಾಗುವುದು. ಕೋವಿಡ್‌ ಪರಿಣಾಮಗಳ ಹೊರತಾಗಿಯೂ ಖಾಸಗಿ ವಲಯದ ಆಸಕ್ತಿ ಪ್ರೋತ್ಸಾಹದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.