ಮುಂಬೈ: ಕೋವಿಡ್–19 ಸೋಂಕು ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿಲಾಕ್ಡೌನ್ ಮಾದರಿಯಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ.
ಏಪ್ರಿಲ್ 14ರಿಂದ ಮೇ 1ರ ವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಅಗತ್ಯ ಸೇವೆಗಳು, ಸಾರ್ವಜನಿಕ ಸಾರಿಗೆ, ಮುಂಬೈ ಉಪನಗರ ರೈಲು ಸೇವೆ ಲಭ್ಯವಿರಲಿವೆ.
ಅಗತ್ಯ ಸೇವೆ ವ್ಯಾಪ್ತಿಯಲ್ಲಿ ಒಳಪಡದವರು ಸೂಕ್ತ ಕಾರಣವಿಲ್ಲದೆ ಸಂಚರಿಸುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
‘ನಾವು ಕಠಿಣ ಕ್ರಮ ಕೈಗೊಳ್ಳಬೇಕಿದೆ. ಜನರ ಜೀವಗಳನ್ನು ಉಳಿಸಬೇಕಿದೆ. ನಾವಿದನ್ನು ನಿರ್ಬಂಧವೆಂದೋ ಲಾಕ್ಡೌನ್ ಎಂದೋ ಏನೆಂದು ಕರೆಯುತ್ತೇವೆ ಎಂಬುದು ಮುಖ್ಯವಲ್ಲ. ಕೊರೊನಾ ಓಡಿಸುವ ಕಾರ್ಯಾಚರಣೆ ಹಮ್ಮಿಕೊಳ್ಳೋಣ. ನಾವು ಸಾಂಕ್ರಾಮಿಕದ ವಿರುದ್ಧ ಹೋರಾಡಬೇಕಿದೆ. ಇದಕ್ಕೆ ಏನು ಅಗತ್ಯವಿದೆಯೋ ಅದನ್ನು ಮಾಡಬೇಕಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಈ ಮಧ್ಯೆ, ಮಂಗಳವಾರ ರಾಜ್ಯದಲ್ಲಿ 60,212 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 281 ಮಂದಿ ಮೃತಪಟ್ಟಿದ್ದಾರೆ. ಸದ್ಯ ರಾಜ್ಯದಲ್ಲಿ 5,93,042 ಸಕ್ರಿಯ ಪ್ರಕರಣಗಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.