ಮುಂಬೈ: ಕೊರೊನಾವೈರಸ್ನ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ದೇಶದಲ್ಲಿ ವರದಿಯಾಗಿರುವುದನ್ನು ಕೇಂದ್ರ ಆರೋಗ್ಯ ಸಚಿವಾಲಯ ಖಚಿತಪಡಿಸಿದ ಬೆನ್ನಲ್ಲೇ, ಮಹಾರಾಷ್ಟ್ರ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ ಮತ್ತು ಜಿಂಬಾಬ್ವೆ ಸೇರಿದಂತೆ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವ ರಾಷ್ಟ್ರಗಳಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್ಟಿ–ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಮತ್ತು 7 ದಿನ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಿದೆ. ಹಾಗೆಯೇ,ಏಳು ದಿನಗಳ ಬಳಿಕ ಮತ್ತೊಮ್ಮೆ ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ವರದಿಯಲ್ಲಿ ನೆಗೆಟಿವ್ ಬಂದರೆ, ಅವರು ಮನೆಯಲ್ಲಿ 7 ದಿನ ಪ್ರತ್ಯೇಕವಾಸದಲ್ಲಿ ಉಳಿಯಬಹುದು. ಒಂದುವೇಳೆ, ವರದಿಯಲ್ಲಿ ಸೋಂಕು ಇರುವುದು ಖಚಿತವಾದರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಕಳೆದ 15 ದಿನಗಳಲ್ಲಿ ಮಹಾರಾಷ್ಟ್ರಕ್ಕೆ ಪ್ರವೇಶಿಸುವ ಮುನ್ನ ಓಮೈಕ್ರಾನ್ ಕಂಡುಬಂದಿರುವ ಯಾವುದೇ ರಾಷ್ಟ್ರಕ್ಕೆ ಭೇಟಿ ನೀಡಿದ್ದರೆ, ಅದನ್ನೂ ‘ಭಾರಿ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ ಎಂದೂ ಸರ್ಕಾರ ತಿಳಿಸಿದೆ.
ದೇಶೀಯ ವಿಮಾನ ಸಂಚಾರ ಮಾಡುವ ಪ್ರಯಾಣಿಕರು, ಪೂರ್ಣಪ್ರಮಾಣದಲ್ಲಿ ಲಸಿಕೆ ಪಡೆದುಕೊಂಡಿರಬೇಕು ಇಲ್ಲವೇ ಪ್ರಯಾಣಕ್ಕೂ 72 ಗಂಟೆಗಳ ಮೊದಲು ಮಾಡಿಸಿದ ಆರ್ಟಿ–ಪಿಸಿಆರ್ ಪರೀಕ್ಷೆಯ 'ನೆಗೆಟಿವ್' ಫಲಿತಾಂಶದ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ ಎಂದೂ ತಿಳಿಸಿದೆ.
ಇವನ್ನೂ ಓದಿ
*ಬೆಂಗಳೂರು ಮೂಲಕ ಭಾರತಕ್ಕೂ ಎಂಟ್ರಿ ಕೊಟ್ಟ ಓಮೈಕ್ರಾನ್:ಕರ್ನಾಟಕದ ಇಬ್ಬರಲ್ಲಿ ಪತ್ತೆ
*ಬೆಂಗಳೂರಲ್ಲಿ ಓಮೈಕ್ರಾನ್: ಸೋಂಕಿತರ ಸಂಪರ್ಕಕ್ಕೆ ಬಂದ ಐವರಿಗೆ ಕೋವಿಡ್!
*ಓಮೈಕ್ರಾನ್ ಆತಂಕ: ಹೆದರುವ ಅವಶ್ಯಕತೆ ಇಲ್ಲವೆಂದ ಕೇಂದ್ರ ಆರೋಗ್ಯ ಇಲಾಖೆ
*ಓಮೈಕ್ರಾನ್ ಉಗಮ ಪತ್ತೆಗೆ ತಂಡ ನಿಯೋಜನೆ
*ಅಮೆರಿಕ: ಓಮೈಕ್ರಾನ್ ಮೊದಲ ಪ್ರಕರಣ ಪತ್ತೆ
*ಓಮೈಕ್ರಾನ್ ಭೀತಿ: ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಬಿಸಿಸಿಐ ನಿರ್ಧಾರ –ಕೊಹ್ಲಿ
*ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ –ಅಶ್ವತ್ಥನಾರಾಯಣ
*ಓಮೈಕ್ರಾನ್: ಕೇಂದ್ರದ ಮಾರ್ಗಸೂಚಿ ಪಾಲಿಸಲು ಮಹಾರಾಷ್ಟ್ರಕ್ಕೆ ಸೂಚನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.