ಮುಂಬೈ: ಮಹಾರಾಷ್ಟ್ರದ ಕರಾವಳಿ ಜಿಲ್ಲೆ ರತ್ನಾಗಿರಿ ಭಾಗದಲ್ಲಿ ಸೋಮವಾರ ಮುಂಜಾನೆ ಲಘುಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4ರಷ್ಟು ಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್ಸಿಎಸ್) ತಿಳಿಸಿದೆ.
5 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರವನ್ನು ಗುರುತಿಸಲಾಗಿದೆ.ಮುಂಜಾನೆ 2.36ರಲ್ಲಿ ಭೂಕಂಪನ ಸಂಭವಿಸಿದೆ ಎಂದು ಎನ್ಸಿಎಸ್ ಮುಖ್ಯಸ್ಥ ಜೆ. ಎಲ್. ಗೌತಮ್ ತಿಳಿಸಿದ್ದಾರೆ.
ತಕ್ಷಣಕ್ಕೆ ಯಾವುದೇ ಆಸ್ತಿ ಹಾನಿ, ಸಾವು ನೋವಿನ ವರದಿಯಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.