ADVERTISEMENT

ಮಹಾರಾಷ್ಟ್ರ: ಕಳ್ಳನೆಂದು ಭಾವಿಸಿ ಯುವಕನ ಹತ್ಯೆ

ಪಿಟಿಐ
Published 10 ಅಕ್ಟೋಬರ್ 2021, 5:07 IST
Last Updated 10 ಅಕ್ಟೋಬರ್ 2021, 5:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಯುವಕನೊಬ್ಬನನ್ನು ಕಳ್ಳ ಎಂದು ತಪ್ಪಾಗಿ ಭಾವಿಸಿದ ಜನರು ಆತನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಮಧ್ಯರಾತ್ರಿ 1.30ರ ವೇಳೆ ಈ ಘಟನೆ ನಡೆದಿದೆ.

ಆಟೊ ಚಾಲಕನ ಮಗನಾದ ರಮೇಶ್‌ ಮುರಳಿ ಎಂಬುವರನ್ನು ಕಳ್ಳ ಎಂದು ಭಾವಿಸಿದ್ದಾಗಿ ಆರೋಪಿಯೊಬ್ಬರು ಹೇಳಿದ್ದಾರೆ. ಆತನನ್ನು ಹಿಡಿದು ಕಬ್ಬಿಣದ ಸರಳು ಮತ್ತು ಕೋಲಿನಿಂದ ಹೊಡೆದು ಪರಾರಿಯಾಗಿದ್ದಾಗಿ ಹೇಳಿದ್ದಾರೆ.

ADVERTISEMENT

ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಆರೋಪಿಗಳಲ್ಲಿ ಕೆಲವರನ್ನು ಪತ್ತೆ ಹಚ್ಚಲಾಗಿದೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ. ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.