ADVERTISEMENT

ಮಹಾರಾಷ್ಟ್ರ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಶಂಕೆ: ತುರ್ತು ಸಭೆ ಕರೆದ ಉದ್ಧವ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2022, 4:09 IST
Last Updated 21 ಜೂನ್ 2022, 4:09 IST
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (ಪಿಟಿಐ ಸಂಗ್ರಹ ಚಿತ್ರ)
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (ಪಿಟಿಐ ಸಂಗ್ರಹ ಚಿತ್ರ)   

ಮುಂಬೈ: ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನವಾಗಿರುವ ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶಿವಸೇನಾ ಶಾಸಕರ ತುರ್ತು ಸಭೆ ಕರೆದಿದ್ದಾರೆ.

ಇಂದು (ಮಂಗಳವಾರ) ಮಧ್ಯಾಹ್ನದ ಒಳಗೆ ಶಿವಸೇನಾ ಶಾಸಕರ ಸಭೆ ನಡೆಯುವ ಸಾಧ್ಯತೆ ಇದೆ. ಎಲ್ಲ ಶಾಸಕರೂ ಕಡ್ಡಾಯವಾಗಿ ಸಭೆಯಲ್ಲಿ ಹಾಜರಿರಬೇಕು ಎಂದು ಉದ್ಧವ್ ಸೂಚಿಸಿದ್ದಾರೆ.

ಸೋಮವಾರ ನಡೆದ ಪರಿಷತ್ ಚುನಾವಣೆಯಲ್ಲಿ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಾಂತ್ ಹಂಡೊರೆಗೆ ಸೋಲಾಗಿತ್ತು.

ADVERTISEMENT

ಈ ಮಧ್ಯೆ, ಶಿವಸೇನಾ ಶಾಸಕರ ಒಂದು ಗುಂಪು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿದೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ 10 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದ ಎಲ್ಲ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆಡಳಿತಾರೂಢ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಐವರು ಮಾತ್ರ ಜಯಗಳಿಸಿದ್ದರು. ಹೀಗಾಗಿ ಅಡ್ಡಮತದಾನ ಶಂಕೆ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.