ADVERTISEMENT

ಏಕನಾಥ ಶಿಂಧೆ ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿ: ಇಂದು ಸಂಜೆ ಪ್ರಮಾಣವಚನ  

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 11:27 IST
Last Updated 30 ಜೂನ್ 2022, 11:27 IST
ಏಕನಾಥ ಶಿಂಧೆ
ಏಕನಾಥ ಶಿಂಧೆ    

ಮುಂಬೈ: ಶಿವಸೇನಾನಾಯಕ ಏಕನಾಥ ಶಿಂಧೆ ಅವರು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಗುರುವಾರ ಸಂಜೆ 7.30ಕ್ಕೆ ಶಿಂಧೆ (58) ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಶಿಂಧೆ ಅವರು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದು ತಮ್ಮದೇ ಗುಂಪು ರಚಿಸಿಕೊಂಡಿದ್ದರು. ತಮ್ಮದೇ ನಿಜವಾದ ಶಿವಸೇನಾ ಎಂದು ಘೋಷಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.