ADVERTISEMENT

ಎಂಎನ್ಎಸ್‌ ನಾಯಕರಿಂದ ಔರಂಗಜೇಬ ಸಮಾಧಿ ಕೆಡವುವ ಮಾತು: ಭದ್ರತೆ ಹೆಚ್ಚಳ

ಪಿಟಿಐ
Published 18 ಮೇ 2022, 5:00 IST
Last Updated 18 ಮೇ 2022, 5:00 IST
ಎಂಎನ್‌ಎಸ್‌ ಮುಖಂಡ ರಾಜ್‌ ಠಾಕ್ರೆ
ಎಂಎನ್‌ಎಸ್‌ ಮುಖಂಡ ರಾಜ್‌ ಠಾಕ್ರೆ   

ಔರಂಗಬಾದ್‌: ಮೊಘಲ್‌ ದೊರೆ ಔರಂಗಜೇಬನ ಸಮಾಧಿಯ ಅವಶ್ಯಕತೆ ಬಗ್ಗೆ ಪ್ರಶ್ನಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್‌) ನಾಯಕರು, ಸಮಾಧಿಯನ್ನು ನೆಲಸಮ ಮಾಡಬೇಕು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಔರಂಗಜೇಬನ ಸಮಾಧಿಯಿರುವ ಸ್ಥಳದಲ್ಲಿ ಭದ್ರತೆ ಹೆಚ್ಚಳ ಮಾಡಿರುವುದಾಗಿ ಬುಧವಾರ ಎಎಸ್‌ಐ ಅಧಿಕಾರಿ ಹೇಳಿದ್ದಾರೆ.

ಸಮಾಧಿ ಸ್ಥಳಕ್ಕೆ ಇತ್ತೀಚೆಗೆ ಎಐಎಂಐಎಂ ಮುಖಂಡ ಅಕ್ಬರುದ್ದೀನ್‌ ಒವೈಸಿ ಭೇಟಿ ನೀಡಿದನ್ನು ಶಿವಸೇನಾ ಟೀಕಿಸಿತ್ತು. ರಾಜ್‌ ಠಾಕ್ರೆ ನೇತೃತ್ವದ ಎಂಎನ್ಎಸ್‌ ಕೂಡ ಅಸಮಾಧಾನ ವ್ಯಕ್ತಪಡಿಸಿತ್ತು.

ADVERTISEMENT

ಮಹಾರಾಷ್ಟ್ರದಲ್ಲಿ ಔರಂಗಜೇಬನ ಸಮಾಧಿಯ ಅವಶ್ಯಕತೆ ಏನಿದೆ? ಅದನ್ನು ನೆಲಸಮ ಮಾಡಬೇಕು. ಹಾಗೆ ಮಾಡಿದರೆ ಜನರು ಅಲ್ಲಿಗೆ ಹೋಗುವುದಿಲ್ಲ ಎಂದು ಎಂಎನ್‌ಎಸ್‌ ವಕ್ತಾರ ಗಜಾನನ್‌ ಕಾಳೆ ಅವರು ಟ್ವೀಟ್‌ ಮಾಡಿದ್ದರು.

ಇದಾದ ಬಳಿಕ ಪುರಾತತ್ವ ಇಲಾಖೆಯಡಿ ರಕ್ಷಣೆಯಲ್ಲಿರುವ ಸಮಾಧಿ ಸ್ಥಳ ಖುಲ್ತಬಾದ್‌ಗೆ ಕೆಲವರು ಬೀಗ ಜಡಿಯುವ ಪ್ರಯತ್ನ ನಡೆಸಿದ್ದಾರೆ.

ಸಮಾಧಿಗೆ ಒವೈಸಿ ಭೇಟಿ ಕುರಿತು ಪ್ರತಿಕ್ರಿಯಿಸಿದ್ದ ಎನ್‌ಸಿಪಿ ಮುಖಂಡ ಶರದ್‌ ಪವಾರ್‌, ಮಹಾರಾಷ್ಟ್ರದ ಶಾಂತಿಯುತ ವಾತಾವರಣವನ್ನು ಹಾಳು ಮಾಡುವ ಕೃತ್ಯ ಎಂದು ಕಿಡಿಕಾರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.