ADVERTISEMENT

ಮಹಾರಾಷ್ಟ್ರದ ಧುಳೆಯಲ್ಲಿ ಭೀಕರ ಅಪಘಾತ: 11 ಸಾವು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 4:40 IST
Last Updated 19 ಆಗಸ್ಟ್ 2019, 4:40 IST
   

ಧುಲೆ: ಮಹಾರಾಷ್ಟ್ರದ ಧುಳೆ ಜಿಲ್ಲೆಯಲ್ಲಿ ಟ್ರಕ್ ಮತ್ತು ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 11 ಮಂದಿ ಸಾವಿಗೀಡಾಗಿದ್ದು,15 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಇಲ್ಲಿನ ನಿಮಗುಲ್ ಗ್ರಾಮದ ಶಹಾದ- ದೊಂಡೈಚ ರಸ್ತೆಯಲ್ಲಿ ಭಾನುವಾರ ರಾತ್ರಿ 10.30ಕ್ಕೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಸ್ ಔರಂಗಬಾದ್‌ಗೆ ಹೋಗುತ್ತಿತ್ತು.

ಬಸ್ ಚಾಲಕ ಸೇರಿದಂತೆ 11 ಮಂದಿ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಗಾಯಾಳುಗಳು ಧುಲೆಯಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT