ADVERTISEMENT

ಬೇರೆಯವರನ್ನೇ ‘ಬಲಿ ಕಾ ಬಕ್ರಾ’ ಮಾಡುವ ಪ್ರಧಾನಿ ಮೋದಿ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಡೆಕ್ಕನ್ ಹೆರಾಲ್ಡ್
Published 20 ಜುಲೈ 2021, 9:38 IST
Last Updated 20 ಜುಲೈ 2021, 9:38 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ತಮ್ಮ ವಿರುದ್ಧದ ದೂಷಣೆಯನ್ನು ಸ್ವೀಕರಿಸುವುದಿಲ್ಲ. ಬೇರೆಯವರನ್ನು ‘ಬಲಿ ಕಾ ಬಕ್ರಾ’ ಮಾಡುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಲೋಕಸಭೆಯ ಮುಂಗಾರು ಅಧಿವೇಶನದ ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು ಕೋವಿಡ್ ಎರಡನೇ ಅಲೆಯ ಸಂದರ್ಭ ಸರ್ಕಾರವು ಜನರ ಬಗ್ಗೆ ಕಾಳಜಿ ವಹಿಸಿಲ್ಲ. ಆಮ್ಲಜನಕದ ಕೊರತೆ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇರುವ ಸಂದರ್ಭ ಸರ್ಕಾರವು ಗಂಟೆ ಬಡಿಯುವುದರಲ್ಲಿ ಮತ್ತು ದೀಪ ಬೆಳಗುವುದರಲ್ಲಿ ವ್ಯಸ್ತವಾಗಿತ್ತು ಎಂದು ಖರ್ಗೆ ದೂರಿದ್ದಾರೆ.

‘ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ಕೋವಿಡ್ ಯೋಧರಿಗೆ ನಾನು ಗೌರವ ಸಲ್ಲಿಸುತ್ತೇನೆ. ದೆಹಲಿಯಲ್ಲಿ ಆಮ್ಲಜನಕಕ್ಕಾಗಿ ಅಲೆದಾಡುತ್ತಿದ್ದವರಿಗೆ ನೆರವಾದವರಿಗೂ ವಂದನೆಗಳು. ಪ್ಲಾಸ್ಮಾ ದಾನ ಮಾಡಿದವರಿಗೂ ಕೃತಜ್ಞತೆಗಳು ಎಂದು ಅವರು ಹೇಳಿದ್ದಾರೆ.

ಸರ್ಕಾರವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.