ADVERTISEMENT

ಅಸಂಘಟಿತ, ವಲಸೆ ಕಾರ್ಮಿಕರಿಗೆ ₹10 ಸಾವಿರ ನೀಡುವಂತೆ ಮಮತಾ ಬ್ಯಾನರ್ಜಿ ಆಗ್ರಹ

ಏಜೆನ್ಸೀಸ್
Published 3 ಜೂನ್ 2020, 7:07 IST
Last Updated 3 ಜೂನ್ 2020, 7:07 IST
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ   

ಪಶ್ಚಿಮ ಬಂಗಾಳ: ಕೊರೊನಾದಿಂದಾಗಿ ಸಂಕಷ್ಟಕ್ಕೆ ಈಡಾಗಿರುವ ಅಸಂಘಟಿತ ಹಾಗೂ ವಲಸೆ ಕಾರ್ಮಿಕರ ಖಾತೆಗಳಿಗೆ ₹10ಸಾವಿರ ಹಣ ಹಾಕುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಕೇಂದ್ರಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕು ಪಿಡುಗು ಊಹೆಗೂ ನಿಲುಕದಂತಹ ಸಂಕಷ್ಟವನ್ನು ಸೃಷ್ಟಿಸಿದ್ದು, ಇದರಿಂದಾಗಿ ಅಸಂಘಟಿತ ವಲಯ ಹಾಗೂ ವಲಸೆ ಕಾರ್ಮಿಕರು ಹಿಂದೆಂದೂ ಕಂಡಿರದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ಇದರಿಂದಾಗಿ ಜನರನ್ನು ಸಂಕಷ್ಟದಿಂದಸದ್ಯಕ್ಕೆ ಪಾರು ಮಾಡಲು ಪ್ರಧಾನಿಯವರ ಬಳಿ ಇರುವ ಪಿಎಂ ಕೇರ್ಸ್ (PM-CARES)ನಿಂದ ಹಣ ಹಾಕುವಂತೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ADVERTISEMENT

ಬಳ್ಳಾರಿ: ಕಳಪೆ ಕಾಮಗಾರಿ, ಇಂಗು ಗುಂಡಿ ಕುಸಿತ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.