ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದಾಗಿಯೇ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಜಯಭೇರಿ ಬಾರಿಸಿತು ಎಂದು ಬಿಜೆಪಿ ಹೇಳಿದೆ.
‘ರಾಜ್ಯದಲ್ಲಿ ಪಕ್ಷವು ಸೋಲಲು ಏನು ಕಾರಣಗಳು ಎನ್ನುವ ಬಗ್ಗೆ ಆತ್ಮವಿಮರ್ಶೆ ಮಾಡಲಾಗುವುದು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ತಿಳಿಸಿದ್ದಾರೆ.
’ಪಶ್ಚಿಮ ಬಂಗಾಳದ ಜನತೆ ದೀದಿ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಮ್ಮ ಪಕ್ಷಕ್ಕೆ ಯಾವ ಕಾರಣಗಳಿಂದ ಹಿನ್ನಡೆಯಾಯಿತು ಎನ್ನುವ ಬಗ್ಗೆ ವಿಶ್ಲೇಷಣೆ ನಡೆಸಲಾಗುವುದು. ಸಂಘಟನೆಯ ವಿಷಯ, ಹೊರಗಿನವರು–ಒಳಗಿನವರಬಹುದು ಅಥವಾ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಇರಬಹುದು. ಸಮಗ್ರವಾಗಿ ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.